crossorigin="anonymous"> Vijay Mallya : ನ್ಯಾಯಾಂಗ ನಿಂದನೆ ಪ್ರಕರಣ – ವಿಜಯ್ ಮಲ್ಯಗೆ ನಾಲ್ಕು ತಿಂಗಳು ಜೈಲು ವಿಧಿಸಿದ ಸುಪ್ರೀಂಕೋರ್ಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Vijay Mallya : ನ್ಯಾಯಾಂಗ ನಿಂದನೆ ಪ್ರಕರಣ – ವಿಜಯ್ ಮಲ್ಯಗೆ ನಾಲ್ಕು ತಿಂಗಳು ಜೈಲು ವಿಧಿಸಿದ ಸುಪ್ರೀಂಕೋರ್ಟ್

Radhakrishna Anegundi by Radhakrishna Anegundi
11-07-22, 1 : 21 pm
in ದೇಶ
vijay-mallya-news-live-updates-sc-sentences-fugitive-vijay-mallya-to-4-month-imprisonment-for-contempt-of-court
Share on FacebookShare on TwitterWhatsAppTelegram

ನವದೆಹಲಿ : 9 ಸಾವಿರ ಕೋಟಿಗೂ ಅಧಿಕ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯಗೆ ಸುಪ್ರೀಂಕೋರ್ಟ್ ( supreme court ) ಶಾಕ್ ಕೊಟ್ಟಿದೆ. ನ್ಯಾಯಾಂಗ ನಿಂದನೆ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್ ವಿಜಯ್ ಮಲ್ಯಗೆ 4 ತಿಂಗಳ ಜೈಲು ವಿಧಿಸಿದೆ.

2017ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಈ ಶಿಕ್ಷೆ ವಿಧಿಸಲಾಗಿದ್ದು, ಮದ್ಯದ ದೊರೆ ವಿಜಯ್ ಮಲ್ಯಗೆ ( Vijay Mallya ) ನಾಲ್ಕು ತಿಂಗಳ ಜೈಲು ಶಿಕ್ಷೆ ಜೊತೆಗೆ 2,000 ರೂ ದಂಡ ವಿಧಿಸಲಾಗಿದೆ. 2017ರಲ್ಲಿ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತಮ್ಮ ಮಕ್ಕಳಿಗೆ 40 ಮಿಲಿಯನ್ ಡಾಲರ್ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಮಲ್ಯ ಅವರಿಗೆ ಈ ಶಿಕ್ಷೆ ವಿಧಿಸಲಾಗಿದೆ.

ಈ ಹಣಕಾಸು ವರ್ಗಾವಣೆ ಸಂಬಂಧ ನ್ಯಾಯಾಲಯದಿಂದ ( supreme court) ಮಾಹಿತಿ ಮುಚ್ಚಿಟ್ಟ ಆರೋಪಕ್ಕೆ ಮಲ್ಯ ( Vijay Mallya ) ಗುರಿಯಾಗಿದ್ದರು. ಹೀಗಾಗಿ ನ್ಯಾಯಾಲಯದ ವಿಧಿಸಿದ ದಂಡವನ್ನು ನಾಲ್ಕು ವಾರಗಳಲ್ಲಿ ಸುಪ್ರೀಂ ಕೋರ್ಟ್ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ ಇಡಬೇಕು. ತಪ್ಪಿದಲ್ಲಿ ಎರಡು ತಿಂಗಳ ಶಿಕ್ಷೆಯನ್ನು ಹೆಚ್ಚುವರಿಯಾಗಿ ಸೇರಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : Bangalore central jail :ಖೈದಿಗಳಿಗೆ ರಾಜಾತಿಥ್ಯ ನೀಡಿದರೆ ಇನ್ಮುಂದೆ ಅಮಾನತು ಇಲ್ಲ : ಕಾರಾಗೃಹ ಕರ್ಮಕಾಂಡದ ಬಳಿಕ ಕ್ರಾಂತಿ

ಇನ್ನು ಮಲ್ಯ ಅವರ ಮಕ್ಕಳಿಗೆ ಮಾಡಿದ 40 ಮಿಲಿಯನ್ ಡಾಲರ್ ವಹಿವಾಟು ಅನೂರ್ಜಿತವಾಗಿದ್ದು, ನಾಲ್ಕು ವಾರಗಳ ಒಳಗೆ ವಸೂಲಾತಿ ಅಧಿಕಾರಿಗೆ ಶೇ.8 ರಷ್ಟು ಬಡ್ಡಿಯೊಂದಿಗೆ ಈ ಮೊತ್ತವನ್ನು ಹಿಂದಿರುಗಿಸುವಂತೆಯೂ ಆದೇಶಿಸಿದೆ. ಒಂದು ವೇಳೆ ಮೊತ್ತ ಹಿಂತಿರುಗಿಸದಿದ್ದರೆ ಮಲ್ಯ ಅವರ ಆಸ್ತಿಯನ್ನು ಜಪ್ತಿ ಮಾಡುವ ಅಧಿಕಾರವನ್ನು ಸಂಬಂಧ ಪಟ್ಟ ಇಲಾಖೆಗೆ ನೀಡಿದೆ.

ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎಸ್.ರವೀಂದ್ರ ಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಪೀಠದಿಂದ ಈ ಆದೇಶ ಹೊರ ಬಿದ್ದಿದೆ.

Crime news : ಎಣ್ಣೆ ಏಟಿನಲ್ಲಿ ಪತ್ನಿ ಮಗನಿಗೆ ಮಚ್ಚಿನೇಟು ಕೊಟ್ಟು ನೇಣಿಗೆ ಕೊರಳೊಡ್ಡಿದ ತಂದೆ

ಹೆಂಡ ಸಾರಾಯಿ ಸಹವಾಸ ಹೆಂಡತಿ ಮಕ್ಕಳ ಉಪವಾಸ ಅನ್ನುವ ಹಳೆಯ ಮಾತು ಹೀಗೆ ಕಂಠ ಪೂರ್ತಿ ಕುಡಿಯುವ ಕಾರಣದಿಂದ ಅದೆಷ್ಟೋ ಹೆಂಡತಿ ಮಕ್ಕಳು ಪ್ರಾಣ ( Crime news ) ಕಳೆದುಕೊಳ್ಳುವಂತಾಗಿದೆ.

ಕಾರವಾರ : ವ್ಯಕ್ತಿಯೊಬ್ಬನ ಮದ್ಯದ ಚಟಕ್ಕೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಕುಮಟಾ ತಾಲೂಕಿನ ಬಗಣೆ ಗ್ರಾಮದಲ್ಲಿ ನಡೆದಿದೆ. ( Crime news ) ಮೃತರನ್ನು ರಾಮಾ ಮರಾಠಿ ( 40) ಅವರ ಪತ್ನಿ ತಾಕಿ ಮತ್ತು ಮಗ ಲಕ್ಷ್ಮಣ ( 12 ) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಂಪತಿಯ ಮತ್ತೊಬ್ಬ ಪುತ್ರ ಭಾಸ್ಕರ ಅನ್ನುವವನು ಬದುಕುಳಿದಿದ್ದಾನೆ.

ರಾಮ ಮರಾಠಿ ವಿಪರೀತ ಕುಡಿತದ ಚಟ ಹತ್ತಿಸಿಕೊಂಡಿದ್ದ. ದಿನ ನಿತ್ಯ ಕುಡಿದು ಬಂದು ಮನೆಯಲ್ಲಿ ಜಗಳ ಮಾಡುತ್ತಿದ್ದ. ಹೀಗೆ ಕುಡಿದ ಮತ್ತಿನಲ್ಲಿ ಭಾನುವಾರ ರಾತ್ರಿಯೂ ಪತ್ನಿಯೊಂದಿಗೆ ಜಗಳ ಪ್ರಾರಂಭಿಸಿದ್ದಾನೆ. ಅದಾಕ್ಯೋ ಭಾನುವಾರ ರಾತ್ರಿ ಜಗಳದ ಅಬ್ಬರ ಜೋರಾಗಿಯೇ ಇತ್ತು. ಇದು ನಿತ್ಯದ ಜಗಳ ಎಂದು ಅಕ್ಕ ಪಕ್ಕದ ಮನೆಯವರು ಸುಮ್ಮನಾಗಿದ್ದಾರೆ.

ಆದರೆ ಬೆಳಗಾಗುವ ಹೊತ್ತಿಗೆ ರಾಮಾ ಮರಾಠಿ ನೇಣಿಗೆ ಕೊರಳೊಡ್ಡಿ ಮೃತಪಟ್ಟಿದ್ದ. ತಾಕಿ ಮತ್ತು ಮಗ ಲಕ್ಷ್ಮಣ ಮಚ್ಚಿನೇಟಿಗೆ ಹೆಣವಾಗಿ ಬಿದ್ದಿದ್ದರು. ಈ ನಡುವೆ ಭಾಸ್ಕರ ಅನ್ನುವ ಪುತ್ರ ಪ್ರಾಣ ಉಳಿಸಿಕೊಂಡಿದ್ದಾನೆ. ಇದೀಗ ಭಾಸ್ಕರ ಕೊಟ್ಟಿರುವ ಹೇಳಿಕೆ ಪ್ರಕಾರ ಪ್ರಕರಣ ದಾಖಲಿಸಿಕೊಂಡಿರುವ ಕುಮಟಾ ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ.

ಭಾಸ್ಕರ ಕೊಟ್ಟಿರುವ ಹೇಳಿಕೆ ಪ್ರಕಾರ, ತಂದೆ ರಾತ್ರಿ ಕುಡಿದ ಮತ್ತಿನಲ್ಲಿ ಗಲಾಟೆ ಪ್ರಾರಂಭಿಸಿದ್ದಾರೆ. ಈ ವೇಳೆ ಮಚ್ಚು ಕೈಗೆತ್ತಿಕೊಂಡ ತಂದೆ ತಾಯಿಯನ್ನು ಕೊಲೆ ಮಾಡಿದ್ದಾರೆ. ತಡೆಯಲು ಹೋದ ವೇಳೆ ಲಕ್ಷ್ಮಣ ಮಚ್ಚಿನೇಟಿಗೆ ಬಲಿಯಾಗಿದ್ದಾನೆ. ಭಾಸ್ಕರನ ಮೇಲೆ ಹಲ್ಲೆ ಮಾಡಲು ಬಂದಾಗ ಆತ ತಪ್ಪಿಸಿಕೊಂಡಿದ್ದಾನೆ.

Tags: FEATURED
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್