ಮಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೆಯ ಅಲೆಯ ಅಬ್ಬರ ಪ್ರಾರಂಭವಾಗಿದೆ.
ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ ಸಾವಿರದ ಗಡಿಯತ್ತ ತಲುಪಿದ್ದು, ನಿರ್ಲಕ್ಷ್ಯ ಹೀಗೆ ಮುಂದುವರಿದರೆ ಸೋಂಕಿತರ ಸಂಖ್ಯೆ ಸಿಕ್ಕಾಪಟ್ಟೆ ಏರಿದರೂ ಅಚ್ಚರಿ ಇಲ್ಲ.
ಈ ನಡುವೆ ಕೊರೋನಾ ಸೋಲಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಚೈನಾ ವೈರಸ್ ಅಬ್ಬರ ಪ್ರಾರಂಭವಾಗಿದೆ. ಮಾಸ್ಕ್, ಸಾಮಾಜಿಕ ಅಂತರ ಮರೆತ ಪರಿಣಾಮದಿಂದ ವೈರಸ್ ಅಬ್ಬರಿಸತೊಡಗಿದೆ.
ಕೇರಳದಲ್ಲೂ ಕೊರೋನಾ ಸೋಂಕಿನ ಅಬ್ಬರ ಅಧಿಕವಾದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸೋಂಕಿತರ ಸಂಖ್ಯೆ ಏರುತ್ತಿದೆ ಎನ್ನಲಾಗಿದೆ.
ಈ ನಡುವೆ ಜಿಲ್ಲೆಯಲ್ಲಿ ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಕ್ಲಸ್ಟರ್ ಮಾದರಿಯಲ್ಲಿ ಕೊರೋನಾ ಸೋಂಕಿನ ಹಾಟ್ ಸ್ಪಾಟ್ ಗಳು ಪತ್ತೆಯಾಗಿದೆ.

ಮುಂದುವರಿದ ಭಾಗವಾಗಿ ಇದೀಗ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿರುವ ಯೇನಪೋಯ ವಿವಿಗೆ ಕೊರೋನಾ ಸೋಂಕಿನ ಭೀತಿ ಎದುರಾಗಿದೆ.
ಸೋಂಕಿನ ಅಬ್ಬರ ಹೆಚ್ಚಾದ ಪರಿಣಾಮ ಯೇನಪೋಯ ವಿವಿಯ 9 ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾಗಿದೆ.
ಶಿಕ್ಷಣ ಸಂಸ್ಥೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ಈ ಹಿನ್ನಲೆಯಲ್ಲಿ ಮೆಡಿಕಲ್, ಡೆಂಟಲ್ ಸೇರಿ 9 ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾಗಿದ್ದು, ಆನ್ ಲೈನ್ ಮೂಲಕ ತರಗತಿ ನಡೆಸಲು ತೀರ್ಮಾನಿಸಲಾಗಿದೆ.
Discussion about this post